ಬ್ರೇಕಿಂಗ್ ನ್ಯೂಸ್
27-08-21 04:32 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 27:ಕಡಬ ತಾಲೂಕಿನ ಕಳಾರ ಎಂಬಲ್ಲಿ ಮನೆ ಹಿಂಬದಿಯ ಶೆಡ್ ನಲ್ಲಿ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಕಡಬ ಪೊಲೀಸರು ದಾಳಿ ನಡೆಸಿದ್ದು, ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮಹಮ್ಮದ್ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಮನೆ ಹಿಂಬದಿಯ ಶೆಡ್ ನಲ್ಲಿ ಇಂದು ಬೆಳಗ್ಗೆ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ದೊರೆತು ಪೊಲೀಸರು ದಾಳಿ ನಡೆಸಿದ್ದು ಅಲ್ಲಿದ್ದ ಮೂವರು ವ್ಯಕ್ತಿಗಳು ಓಡಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಅಬ್ದುಲ್ ರಹಿಮಾನ್ ಎಂಬಾತನನ್ನು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.

ಆರೋಪಿಗಳು ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದರು. ಪ್ಲಾಸ್ಟಿಕ್ ಟರ್ಪಾಲಿನಲ್ಲಿ ಮಾಡಿಟ್ಟಿದ್ದ 40 ಕೇಜಿ ದನದ ಮಾಂಸ, ದನದ ನಾಲ್ಕು ಕಾಲುಗಳು, ಇಲೆಕ್ಟ್ರಾನಿಕ್ ತೂಕಮಾಪನ, ಕಬ್ಬಿಣದ ಕತ್ತಿಗಳು, ನಾಲ್ಕು ಚೂರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೆಡ್ ಹೊರಗಡೆ ಕಟ್ಟಿಹಾಕಿದ್ದ ನಾಲ್ಕು ಕರುಗಳನ್ನು ರಕ್ಷಿಸಿದ್ದಾರೆ. ಮಾಂಸ ಮತ್ತು ಜೀವಂತ ಇರುವ ದನದ ಕರುಗಳ ಒಟ್ಟು ಮೌಲ್ಯ 19,500 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಡಿ ಪರಾರಿಯಾಗಿರುವ ಮಹಮ್ಮದ್ ಶರೀಫ್ ಹಾಗೂ ಮಹಮ್ಮದ್ ಮುಸ್ತಫ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm