ಬ್ರೇಕಿಂಗ್ ನ್ಯೂಸ್
28-08-21 12:03 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಸುಳಿವಿನ ಮೇರೆಗೆ ತಮಿಳುನಾಡಿಗೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಘಟನೆ ಸಂಬಂಧಿಸಿ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಸರಿಯಾದ ಸುಳಿವು ಸಿಗದ ಕಾರಣ ಆರೋಪಿಗಳನ್ನು ಪತ್ತೆ ಮಾಡುವುದು ಸಾಧ್ಯವಾಗಲಿಲ್ಲ. ತಾಂತ್ರಿಕ ಸಾಕ್ಷ್ಯಗಳ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರನ್ನೇ ಆರೋಪಿಗಳನ್ನಾಗಿ ತೋರಿಸಲಿದ್ದಾರೆ.




ಕೆಲವು ಮೂಲಗಳ ಪ್ರಕಾರ, ತಮಿಳುನಾಡು ಕಡೆಯಿಂದ ಬೆಂಗಳೂರಿಗೆ ಬಂದಿದ್ದ ವ್ಯಾಪಾರಿಗಳ ತಂಡ ಹಿಂತಿರುಗಿ ಹೋಗುವಾಗ ರೋಡ್ ರಾಬರಿಗೆ ಯತ್ನಿಸುತ್ತಿದ್ದಾಗ ಯುವ ಜೋಡಿ ಕೈಗೆ ಸಿಕ್ಕಿಬಿದ್ದಿದ್ದು ಯುವತಿಯ ಮೇಲೆರಗಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಮೈಸೂರಿನ ಕಾಲೇಜೊಂದರ ಬಿಇ ವಿದ್ಯಾರ್ಥಿಗಳು ಕೂಡ ನಾಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿತ್ತು. ತಮಿಳುನಾಡಿನ ಮೂವರು ಮತ್ತು ಇನ್ನೊಬ್ಬ ಕೇರಳದ ನಿವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು.
ಇದೀಗ ಹಲವು ಕಡೆಗಳಿಂದ 25ಕ್ಕೂ ಹೆಚ್ಚು ಮಂದಿಯನ್ನು ಶಂಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಅನುಸಾರ ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆ ನಡೆಸಲಿದ್ದಾರೆ. ಸಂತ್ರಸ್ತ ಯುವತಿ ಮತ್ತು ಯುವಕನ ಮೂಲಕವೇ ಆರೋಪಿಗಳ ಪತ್ತೆ ಕಾರ್ಯ ನಡೆಯಲಿದೆ. ಆದರೆ, ಸಂತ್ರಸ್ತ ಯುವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮುಂಬೈಗೆ ತೆರಳಿದ್ದಾರೆ. ಯುವಕನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಈ ನಡುವೆ, ಆರೋಪಿಗಳು ತಮಿಳು ಮಾತನಾಡುತ್ತಿದ್ದರು. ಕಾರ್ಮಿಕರ ರೀತಿ ಇದ್ದರು ಎಂಬ ಬಗ್ಗೆ ಯುವಕ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
The Mysuru Police have arrested five persons for gang raping a college student after assaulting her friend at the foot of Chamundi Hill. The heinous crime was committed on the night of Aug. 24 and the incident hit national headlines. Now the city Police have managed to apprehend five accused.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm