ಬ್ರೇಕಿಂಗ್ ನ್ಯೂಸ್
28-08-21 10:01 pm Headline Karnataka News Network ಕ್ರೈಂ
ಭೋಪಾಲ್, ಆಗಸ್ಟ್ 28; ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಬಿದ್ದಿದ್ದ ಸಿವಿಲ್ ಇಂಜಿನಿಯರನೊಬ್ಬ ಇಬ್ಬರು ಮಕ್ಕಳ ಕುತ್ತಿಗೆ ಕೊಯ್ದು ಪತ್ನಿಯೊಂದಿಗೆ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ನಡೆದಿದೆ.
ಭೋಪಾಲ್ ನಗರದ ಮಿಸ್ ರೋಡ್ ಠಾಣೆ ವ್ಯಾಪ್ತಿಯ ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಘಟನೆ ನಡೆದಿದ್ದು, 16 ವರ್ಷದ ಮಗ ಸಾವು ಕಂಡಿದ್ದರೆ, 14 ವರ್ಷದ ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಆಕೆಯ ತಾಯಿ ಕೂಡ ಆಸ್ಪತ್ರೆಯಲ್ಲಿದ್ದು, ಅಪಾಯದಿಂದ ಪಾರಾಗಿದ್ದಾಳೆ.
55 ವರ್ಷದ ವ್ಯಕ್ತಿ ಮತ್ತು ಆತನ ಪತ್ನಿ ಇಬ್ಬರೂ ಸೇರಿ ತಮ್ಮ ಬದುಕು ಕೊನೆಗಾಣಿಸಲು ನಿರ್ಧರಿಸಿದ್ದರು. ಆದಕ್ಕಾಗಿ ಎರಡು, ಮೂರು ದಿನಗಳಿಂದ ಪ್ಲಾನ್ ಹಾಕಿದ್ದರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ವ್ಯಕ್ತಿ ಕಳೆದ ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ. ಇದರಿಂದ ಇಡೀ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮನೆಯ ತಿಂಗಳ ಕಂತು ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಶಿಕ್ಷಣದ ಖರ್ಚನ್ನೂ ಭರಿಸಲು ಸಾಧ್ಯವಾಗುತ್ತಿಲ್ಲ. ತಾವು ಸತ್ತರೆ ಮಕ್ಕಳಿಗೂ ಕಷ್ಟವಾಗುತ್ತದೆ. ಅವರ ಭವಿಷ್ಯವೂ ಕರಾಳವಾಗುತ್ತದೆ. ಹೀಗಾಗಿ ಅವನ್ನೂ ಕೊಲ್ಲಲು ನಿರ್ಧರಿಸಿದ್ದೆ ಎಂದು ಪತ್ರದಲ್ಲಿ ಬರೆದಿದ್ದಾನೆ. ಪುತ್ರ ಮತ್ತು ಪುತ್ರಿಯ ಕುತ್ತಿಗೆಯನ್ನು ಟೈಲ್ ಕಟ್ಟರ್ ಬಳಸಿ ಕೊಯ್ದಿದ್ದ ವ್ಯಕ್ತಿ ಆನಂತರ ಪತ್ನಿಯೊಂದಿಗೆ ಸೇರಿ ವಿಷವನ್ನು ಸೇವಿಸಿದ್ದರು. ತಾಯಿ, ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದರೆ, ತಂದೆ, ಮಗ ಸಾವು ಕಂಡಿದ್ದಾರೆ.
A civil engineer, who was jobless for the last few months, allegedly committed suicide by consuming poison after slitting the throats of his teenage son and daughter with a tile cutter at their flat in a multistoried building in Madhya Pradesh's Bhopal, police said. While his 16-year-old son died of his injuries, 14-year-old daughter's condition is said to be critical, they said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm