ಬ್ರೇಕಿಂಗ್ ನ್ಯೂಸ್
28-08-21 10:01 pm Headline Karnataka News Network ಕ್ರೈಂ
ಭೋಪಾಲ್, ಆಗಸ್ಟ್ 28; ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಬಿದ್ದಿದ್ದ ಸಿವಿಲ್ ಇಂಜಿನಿಯರನೊಬ್ಬ ಇಬ್ಬರು ಮಕ್ಕಳ ಕುತ್ತಿಗೆ ಕೊಯ್ದು ಪತ್ನಿಯೊಂದಿಗೆ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ನಡೆದಿದೆ.
ಭೋಪಾಲ್ ನಗರದ ಮಿಸ್ ರೋಡ್ ಠಾಣೆ ವ್ಯಾಪ್ತಿಯ ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಘಟನೆ ನಡೆದಿದ್ದು, 16 ವರ್ಷದ ಮಗ ಸಾವು ಕಂಡಿದ್ದರೆ, 14 ವರ್ಷದ ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಆಕೆಯ ತಾಯಿ ಕೂಡ ಆಸ್ಪತ್ರೆಯಲ್ಲಿದ್ದು, ಅಪಾಯದಿಂದ ಪಾರಾಗಿದ್ದಾಳೆ.
55 ವರ್ಷದ ವ್ಯಕ್ತಿ ಮತ್ತು ಆತನ ಪತ್ನಿ ಇಬ್ಬರೂ ಸೇರಿ ತಮ್ಮ ಬದುಕು ಕೊನೆಗಾಣಿಸಲು ನಿರ್ಧರಿಸಿದ್ದರು. ಆದಕ್ಕಾಗಿ ಎರಡು, ಮೂರು ದಿನಗಳಿಂದ ಪ್ಲಾನ್ ಹಾಕಿದ್ದರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ವ್ಯಕ್ತಿ ಕಳೆದ ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ. ಇದರಿಂದ ಇಡೀ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮನೆಯ ತಿಂಗಳ ಕಂತು ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಶಿಕ್ಷಣದ ಖರ್ಚನ್ನೂ ಭರಿಸಲು ಸಾಧ್ಯವಾಗುತ್ತಿಲ್ಲ. ತಾವು ಸತ್ತರೆ ಮಕ್ಕಳಿಗೂ ಕಷ್ಟವಾಗುತ್ತದೆ. ಅವರ ಭವಿಷ್ಯವೂ ಕರಾಳವಾಗುತ್ತದೆ. ಹೀಗಾಗಿ ಅವನ್ನೂ ಕೊಲ್ಲಲು ನಿರ್ಧರಿಸಿದ್ದೆ ಎಂದು ಪತ್ರದಲ್ಲಿ ಬರೆದಿದ್ದಾನೆ. ಪುತ್ರ ಮತ್ತು ಪುತ್ರಿಯ ಕುತ್ತಿಗೆಯನ್ನು ಟೈಲ್ ಕಟ್ಟರ್ ಬಳಸಿ ಕೊಯ್ದಿದ್ದ ವ್ಯಕ್ತಿ ಆನಂತರ ಪತ್ನಿಯೊಂದಿಗೆ ಸೇರಿ ವಿಷವನ್ನು ಸೇವಿಸಿದ್ದರು. ತಾಯಿ, ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದರೆ, ತಂದೆ, ಮಗ ಸಾವು ಕಂಡಿದ್ದಾರೆ.
A civil engineer, who was jobless for the last few months, allegedly committed suicide by consuming poison after slitting the throats of his teenage son and daughter with a tile cutter at their flat in a multistoried building in Madhya Pradesh's Bhopal, police said. While his 16-year-old son died of his injuries, 14-year-old daughter's condition is said to be critical, they said.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm