ಬ್ರೇಕಿಂಗ್ ನ್ಯೂಸ್
28-08-21 10:37 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 28: ಪೊಲೀಸರು ಕಳ್ಳರನ್ನು ಹಿಡಿಯೋರು ಅಂತಾರೆ. ಹಾಗಾಗಿ, ಕಳ್ಳ ಏನಿದ್ದರೂ ಪೊಲೀಸರ ಮನೆಗಂತೂ ಕನ್ನ ಹಾಕಲು ಹೋಗಲ್ಲ. ಸಿಕ್ಕಿಬಿದ್ದರೆ ಬೆನ್ನು ಚಪ್ಪಡಿ ಮಾಡಿಕೊಳ್ಳಬೇಕು ಅಂತ ಪೊಲೀಸರ ಉಸಾಬರಿ ಬೇಡವೆಂದು ದೂರ ನಿಲ್ಲುತ್ತಾರೆ. ಆದರೆ, ಇಲ್ಲೊಬ್ಬ ಪೊಲೀಸರಿಗೇ ಮೇಷ್ಟ್ರು ಆಗಿರುವ ಇನ್ ಸ್ಪೆಕ್ಟರ್ ಒಬ್ಬರ ಮನೆಗೆ ಕನ್ನ ಹಾಕಿದ್ದಾನೆ.
ಹೌದು.. ಮಂಗಳೂರಿನಲ್ಲಿ ಈ ಹಿಂದೆ ಉರ್ವಾ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿದ್ದ, ಸದ್ಯಕ್ಕೆ ಸಂಚಾರ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಮಹಮ್ಮದ್ ಶರೀಫ್ ಅವರ ಮನೆಯ ಹೊರಗೆ ನಿಲ್ಲಿಸಿದ್ದ ಸೈಕಲನ್ನು ಕಳ್ಳ ಎಗರಿಸಿದ್ದಾನೆ. ಉರ್ವಾ ಮೈದಾನದ ಬಳಿಯ ಚೈತನ್ಯ ಅಪಾರ್ಟ್ಮೆಂಟ್ ನಲ್ಲಿ ಒಂದನೇ ಮಹಡಿಯಲ್ಲಿ ಇನ್ ಸ್ಪೆಕ್ಟರ್ ಶರೀಫ್ ಮನೆಯಿದೆ.
ಕೆಳಗೆ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಶರೀಫ್ ಪುತ್ರನಿಗೆ ಸೇರಿದ 25 ಸಾವಿರ ಮೌಲ್ಯದ ಸೈಕಲನ್ನು ವ್ಯಕ್ತಿಯೊಬ್ಬ ಎಗರಿಸಿದ್ದಾನೆ. ಸೈಕಲನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಫ್ಲಾಟಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ 26ರಂದು ಮಧ್ಯಾಹ್ನ ಘಟನೆ ನಡೆದಿದ್ದು, ಈ ಬಗ್ಗೆ ಇನ್ ಸ್ಪೆಕ್ಟರ್ ಶರೀಫ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ಕಳವು ಪೊಲೀಸರ ಮನೆಯಿಂದಲೇ ಆಗಿದ್ದರೂ, ಆ ಬಗ್ಗೆ ದೂರು ದಾಖಲು ಮಾಡಬೇಕಾದ್ದು ಪೊಲೀಸ್ ಠಾಣೆಯಲ್ಲೇ ತಾನೆ.
ಆದರೆ, ಇಲ್ಲಿ ಠಾಣೆಯ ಮುಖ್ಯಸ್ಥ ಆಗಿರುವ ಇನ್ ಸ್ಪೆಕ್ಟರ್ ಮನೆಯಿಂದಲೇ ಕಳವಾಗಿದ್ದು, ಚಾಣಾಕ್ಷ ಕಳ್ಳ ಸೈಕಲನ್ನು ಎಗರಿಸಿ ಪೊಲೀಸನಿಗೇ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಸದ್ಯಕ್ಕೆ ಸೈಕಲ್ ಕದ್ಕೊಂಡು ತೆರಳಿರುವ ಕಳ್ಳನ ಸಿಸಿಟಿವಿ ಫೋಟೋವನ್ನು ಪೊಲೀಸರು ವಾಟ್ಸಪ್ ಗ್ರೂಪಿನಲ್ಲಿ ಹಾಕಿದ್ದಾರೆ. ಸೈಕಲಿಗೆ ಸೀರಿಯಲ್ ನಂಬರ್ ಅಂತೂ ಇಲ್ಲ. ಕಳ್ಳನ ಮುಖ ನೋಡಿಯೇ ಸೈಕಲ್ ಹುಡುಕಬೇಕಷ್ಟೆ.
Man steals bicycle worth 25 thousand from Traffic Police inspectors Shariff's house in Urwa, Mangalore
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm