ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm