ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm