ಬ್ರೇಕಿಂಗ್ ನ್ಯೂಸ್
31-08-21 01:04 pm Headline Karnataka News Network ಕ್ರೈಂ
ದಾವಣಗೆರೆ, ಆಗಸ್ಟ್ 31: ಮದ್ಯಪಾನ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಪತ್ನಿಯನ್ನೇ ಪತಿ ಕತ್ತು ಹಿಸುಕಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಜರುಗಿದೆ.
40 ವರ್ಷದ ಶಿಲ್ಪ ಪತಿಯಿಂದ ಕೊಲೆಯಾದ ದುರ್ದೈವಿ. ಗಿರೀಶ್ ಆರೋಪಿ. ಸರಟೂರು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಗಿರೀಶ್ ಹಾಗೂ ಶಿಲ್ಪಾ ದಂಪತಿ ವಾಸವಿದ್ದರು. ಪ್ರತಿನಿತ್ಯ ಆರೋಪಿ ಕುಡಿದು ಮನೆಗೆ ಬರುತ್ತಿದ್ದನಂತೆ. ಕುಡಿಯಬೇಡಿ ಎಂದು ಹೇಳಿದ್ದಕ್ಕೆ ಆಕೆಯನ್ನು ಕೊಲೆ ಮಾಡಿರುವ ಗಿರೀಶ್ ತಲೆಮರೆಸಿಕೊಂಡಿದ್ದ. ಈ ಕುರಿತು ತನಿಖೆ ನಡೆಸಿದ ಹೊನ್ನಾಳಿ ಸಿಪಿಐ ದೇವರಾಜ್ ನೇತೃತ್ವದ ತಂಡ ಕೇವಲ 8 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಕುಡಿದು ಬಂದ ಪತಿ ಗಿರೀಶ್, ಊಟ ನೀಡುವಂತೆ ಪತ್ನಿ ಶಿಲ್ಪಾಳ ಬಳಿ ಕ್ಯಾತೆ ತೆಗೆದು ಜಗಳ ಮಾಡಿದ್ದಾನೆ. ಈ ವೇಳೆ ಊಟ ನೀಡದ ಶಿಲ್ಪಾ ಮದ್ಯಪಾನ ಮಾಡ್ಬೇಡ ಎಂದು ಬುದ್ಧಿವಾದ ಹೇಳಿದ್ದಾಳೆ. ನಶೆಯಲ್ಲಿದ್ದ ಗಿರೀಶ್ ಪತ್ನಿಗೆ ಹೊಡೆದು, ಕುತ್ತಿಗೆಗೆ ನೇಣು ಬಿಗಿಯಲು ಮುಂದಾಗಿದ್ದಾನೆ. ಶಿಲ್ಪಾ ಕಾಲಿನಿಂದ ಒದ್ದಿದ್ದು, ಗಿರೀಶ್ಗೆ ಗಾಯಗಳಾಗಿದೆ. ಗಾಯಗೊಂಡರೂ ಬಿಡದ ಆತ ನಂತರ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಆರೋಪಿ ಪತಿ ಗಿರೀಶ್ ಪತ್ನಿಯನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ. ದಂಪತಿಯ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಕೊಲೆ ಮಾಡಿ ಮನೆಯಿಂದ ಕಾಲ್ಕಿತ್ತು ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಜನರಿಂದ ಮಾಹಿತಿ ಪಡೆದ ಹೊನ್ನಾಳಿ ಪೋಲಿಸರು ಆಸ್ಪತ್ರೆಗೆ ಬಂಧಿಸಲು ಧಾವಿಸುವಷ್ಟರಲ್ಲಿ ಆತ ಕಾಲ್ಕಿತ್ತಿದ್ದಾನೆ.
ಆರೋಪಿಯ ಜಾಡು ಹಿಡಿದು ಹೋದ ಪೊಲೀಸರು ಕೊನೆಗೂ ಶಿಕಾರಿಪುರ ರಸ್ತೆಯಲ್ಲಿ ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Davanagere Husband kills wife for advising not to drink. Husband has been arrested by police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm