ಬ್ರೇಕಿಂಗ್ ನ್ಯೂಸ್
02-09-21 01:34 pm Mangaluru Correspondent ಕ್ರೈಂ
ಪುತ್ತೂರು, ಸೆ.2: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದಿದ್ದ ರಾಯಚೂರು ಮೂಲದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32), ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ಷೇರ್ ಚಾಟ್ ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ಭೇಟಿಯಾಗುವ ಉದ್ದೇಶದಿಂದ ಬುಧವಾರ ಮಧ್ಯಾಹ್ನ ರಾಯಚೂರು ಮೂಲದ ಹನುಮಂತರಾಯ ಎಂಬಾತ ಬಂದಿದ್ದ. ಪುತ್ತೂರು ಕೆಎಸ್ ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯ ಜೊತೆ ಮಾತನಾಡುತ್ತಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ ಗ್ರಾಮದ ನಿವಾಸಿ, ಯುವಕ ಹನುಮಂತರಾಯ(19) ಆರು ತಿಂಗಳ ಹಿಂದೆ ಹುಡುಗಿಯ ಪರಿಚಯ ಆಗಿದ್ದು ಚಾಟಿಂಗ್ ಮತ್ತು ಫೋನ್ ನಂಬರ್ ಪಡೆದು ಮಾತನಾಡುತ್ತಿದ್ದರು. ಹುಡುಗಿಯನ್ನು ಭೇಟಿಯಾಗಲೆಂದು ತನ್ನ ಸ್ನೇಹಿತ ಚೌಡಯ್ಯ ಎಂಬ ಯುವಕನೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ, ಹುಡುಗಿ ತನ್ನ ಸ್ನೇಹಿತೆಯ ಜೊತೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಾಲ್ವರೂ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ, ಐದಾರು ಮಂದಿ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹನುಮಂತರಾಯ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೇ ಸ್ನೇಹದ ನೆಪದಲ್ಲಿ ಭೇಟಿಯಾಗಿದ್ದನ್ನೇ ನೆಪವಾಗಿರಿಸಿ ಮುಸ್ಲಿಂ ಗುಂಪು ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರು ನಡೆಸುವ ನೈತಿಕ ಪೊಲೀಸ್ ರೀತಿಯ ವರ್ತನೆಯೇ ಆಗಿತ್ತು.
Puttur Group of people intercepts questions two men woman seen together
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm