ಬ್ರೇಕಿಂಗ್ ನ್ಯೂಸ್
02-09-21 02:45 pm Mangaluru Correspondent ಕ್ರೈಂ
ಮಂಗಳೂರು, ಸೆ.2: ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡಿದ್ದ ಯುವತಿಗೆ ಮೋಸ ಮಾಡಿದ್ದಲ್ಲದೆ, ಆಕೆಯಿಂದಲೇ ಹಣ ಸಾಲ ಪಡೆದು ವಂಚಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಜಗನ್ನಾಥ್ ಎಸ್. ಸಜ್ಜನರ್ (34) ಎಂಬಾತ ವಂಚಿಸಿ ಸಿಕ್ಕಿಬಿದ್ದ ಯುವಕ. ಈತನನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ತನಗೆ ವಂಚನೆ ಆಗಿರುವ ಬಗ್ಗೆ ಸುರತ್ಕಲ್, ಮಧ್ಯ ಗ್ರಾಮದ ನಿವಾಸಿ ನಾಗಶ್ರೀ ಎಂಬ ಯುವತಿ ಪೊಲೀಸ್ ದೂರು ನೀಡಿದ್ದರು.
ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ಹೇಳಿಕೊಂಡಿದ್ದ ಜಗನ್ನಾಥ್, ತಾನು ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾನೆ. ಅಲ್ಲದೆ, ತಾನು ಮದುವೆಯಾಗುತ್ತೇನೆ ಎಂದು ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ. ಆನಂತರ ಫ್ಲ್ಯಾಟ್ ಖರೀದಿಸಬೇಕೆಂದು ಹೇಳಿ ಯುವತಿಯಿಂದಲೇ ಹಣ ಸಾಲ ಪಡೆದಿದ್ದಾನೆ.

ನಾಗಶ್ರೀ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯಿಂದ ಮೂರು ಲಕ್ಷ ರೂಪಾಯಿ ಹಣವನ್ನು ಸಾಲ ಪಡೆದಿದ್ದ. ಆಕೆ, ತನ್ನ ಚಿನ್ನವನ್ನು ಫೈನಾನ್ಸ್ ನಲ್ಲಿ ಅಡವಿಟ್ಟು ಮೂರು ಲಕ್ಷ ರೂ. ಹಣವನ್ನು ಜಗನ್ನಾಥ್ ಗೆ ನೀಡಿದ್ದ. ಆನಂತರ, ಈ ನಡುವೆ ಒಂದೂವರೆ ಲಕ್ಷ ರೂಪಾಯಿಯನ್ನು ಯುವತಿಗೆ ಮರಳಿಸಿದ್ದ. ಆದರೆ, ಸ್ವಲ್ಪ ದಿನಗಳ ನಂತರ ಯುವತಿಯನ್ನು ನಂಬಿಸಿ ಆ ಹಣವನ್ನೂ ಮರಳಿ ಪಡೆದಿದ್ದ.

ಹಣ ಪಡೆದು ಹೋದ ಜಗನ್ನಾಥ್ ನಾಪತ್ತೆಯಾಗಿದ್ದರಿಂದ ಮೋಸಗೊಂಡಿದ್ದನ್ನು ತಿಳಿದು, ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಯುವತಿ ನೇರವಾಗಿ ಹೆಣ್ಣೂರು ಠಾಣೆಗೆ ದೂರು ನೀಡಿದ್ದಳು. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆತ ಬಹಳಷ್ಟು ಯುವತಿಯರಿಗೆ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡು ಮೋಸ ಎಸಗಿದ್ದು ತಿಳಿದುಬಂದಿದೆ. ರಾಜ್ಯದ ವಿವಿಧ ಕಡೆ ಹತ್ತಕ್ಕೂ ಹೆಚ್ಚು ಠಾಣೆಗಳಲ್ಲಿ ಜಗನ್ನಾಥ್ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿವೆ.
Hennur Police on Wednesday arrested a 34-year-old man who allegedly cheated woman on a matrimonial site by pretending to be a civil engineer. The accused, identified as Jagannath S Sajjanar, had come out of prison on bail barely eight months ago and resumed his criminal activities since then, police said. Jagannath is a resident of Ullal, but originally hails from Vijayapura.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm