ಬ್ರೇಕಿಂಗ್ ನ್ಯೂಸ್
02-09-21 02:45 pm Mangaluru Correspondent ಕ್ರೈಂ
ಮಂಗಳೂರು, ಸೆ.2: ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡಿದ್ದ ಯುವತಿಗೆ ಮೋಸ ಮಾಡಿದ್ದಲ್ಲದೆ, ಆಕೆಯಿಂದಲೇ ಹಣ ಸಾಲ ಪಡೆದು ವಂಚಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಜಗನ್ನಾಥ್ ಎಸ್. ಸಜ್ಜನರ್ (34) ಎಂಬಾತ ವಂಚಿಸಿ ಸಿಕ್ಕಿಬಿದ್ದ ಯುವಕ. ಈತನನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ತನಗೆ ವಂಚನೆ ಆಗಿರುವ ಬಗ್ಗೆ ಸುರತ್ಕಲ್, ಮಧ್ಯ ಗ್ರಾಮದ ನಿವಾಸಿ ನಾಗಶ್ರೀ ಎಂಬ ಯುವತಿ ಪೊಲೀಸ್ ದೂರು ನೀಡಿದ್ದರು.
ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ಹೇಳಿಕೊಂಡಿದ್ದ ಜಗನ್ನಾಥ್, ತಾನು ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾನೆ. ಅಲ್ಲದೆ, ತಾನು ಮದುವೆಯಾಗುತ್ತೇನೆ ಎಂದು ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ. ಆನಂತರ ಫ್ಲ್ಯಾಟ್ ಖರೀದಿಸಬೇಕೆಂದು ಹೇಳಿ ಯುವತಿಯಿಂದಲೇ ಹಣ ಸಾಲ ಪಡೆದಿದ್ದಾನೆ.

ನಾಗಶ್ರೀ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯಿಂದ ಮೂರು ಲಕ್ಷ ರೂಪಾಯಿ ಹಣವನ್ನು ಸಾಲ ಪಡೆದಿದ್ದ. ಆಕೆ, ತನ್ನ ಚಿನ್ನವನ್ನು ಫೈನಾನ್ಸ್ ನಲ್ಲಿ ಅಡವಿಟ್ಟು ಮೂರು ಲಕ್ಷ ರೂ. ಹಣವನ್ನು ಜಗನ್ನಾಥ್ ಗೆ ನೀಡಿದ್ದ. ಆನಂತರ, ಈ ನಡುವೆ ಒಂದೂವರೆ ಲಕ್ಷ ರೂಪಾಯಿಯನ್ನು ಯುವತಿಗೆ ಮರಳಿಸಿದ್ದ. ಆದರೆ, ಸ್ವಲ್ಪ ದಿನಗಳ ನಂತರ ಯುವತಿಯನ್ನು ನಂಬಿಸಿ ಆ ಹಣವನ್ನೂ ಮರಳಿ ಪಡೆದಿದ್ದ.

ಹಣ ಪಡೆದು ಹೋದ ಜಗನ್ನಾಥ್ ನಾಪತ್ತೆಯಾಗಿದ್ದರಿಂದ ಮೋಸಗೊಂಡಿದ್ದನ್ನು ತಿಳಿದು, ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಯುವತಿ ನೇರವಾಗಿ ಹೆಣ್ಣೂರು ಠಾಣೆಗೆ ದೂರು ನೀಡಿದ್ದಳು. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆತ ಬಹಳಷ್ಟು ಯುವತಿಯರಿಗೆ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡು ಮೋಸ ಎಸಗಿದ್ದು ತಿಳಿದುಬಂದಿದೆ. ರಾಜ್ಯದ ವಿವಿಧ ಕಡೆ ಹತ್ತಕ್ಕೂ ಹೆಚ್ಚು ಠಾಣೆಗಳಲ್ಲಿ ಜಗನ್ನಾಥ್ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿವೆ.
Hennur Police on Wednesday arrested a 34-year-old man who allegedly cheated woman on a matrimonial site by pretending to be a civil engineer. The accused, identified as Jagannath S Sajjanar, had come out of prison on bail barely eight months ago and resumed his criminal activities since then, police said. Jagannath is a resident of Ullal, but originally hails from Vijayapura.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm