ಬ್ರೇಕಿಂಗ್ ನ್ಯೂಸ್
02-09-21 02:45 pm Mangaluru Correspondent ಕ್ರೈಂ
ಮಂಗಳೂರು, ಸೆ.2: ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡಿದ್ದ ಯುವತಿಗೆ ಮೋಸ ಮಾಡಿದ್ದಲ್ಲದೆ, ಆಕೆಯಿಂದಲೇ ಹಣ ಸಾಲ ಪಡೆದು ವಂಚಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಜಗನ್ನಾಥ್ ಎಸ್. ಸಜ್ಜನರ್ (34) ಎಂಬಾತ ವಂಚಿಸಿ ಸಿಕ್ಕಿಬಿದ್ದ ಯುವಕ. ಈತನನ್ನು ಬೆಂಗಳೂರಿನ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ತನಗೆ ವಂಚನೆ ಆಗಿರುವ ಬಗ್ಗೆ ಸುರತ್ಕಲ್, ಮಧ್ಯ ಗ್ರಾಮದ ನಿವಾಸಿ ನಾಗಶ್ರೀ ಎಂಬ ಯುವತಿ ಪೊಲೀಸ್ ದೂರು ನೀಡಿದ್ದರು.
ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ಹೇಳಿಕೊಂಡಿದ್ದ ಜಗನ್ನಾಥ್, ತಾನು ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾನೆ. ಅಲ್ಲದೆ, ತಾನು ಮದುವೆಯಾಗುತ್ತೇನೆ ಎಂದು ನಂಬಿಸಿ ಸಲುಗೆ ಬೆಳೆಸಿಕೊಂಡಿದ್ದ. ಆನಂತರ ಫ್ಲ್ಯಾಟ್ ಖರೀದಿಸಬೇಕೆಂದು ಹೇಳಿ ಯುವತಿಯಿಂದಲೇ ಹಣ ಸಾಲ ಪಡೆದಿದ್ದಾನೆ.
ನಾಗಶ್ರೀ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಆಕೆಯಿಂದ ಮೂರು ಲಕ್ಷ ರೂಪಾಯಿ ಹಣವನ್ನು ಸಾಲ ಪಡೆದಿದ್ದ. ಆಕೆ, ತನ್ನ ಚಿನ್ನವನ್ನು ಫೈನಾನ್ಸ್ ನಲ್ಲಿ ಅಡವಿಟ್ಟು ಮೂರು ಲಕ್ಷ ರೂ. ಹಣವನ್ನು ಜಗನ್ನಾಥ್ ಗೆ ನೀಡಿದ್ದ. ಆನಂತರ, ಈ ನಡುವೆ ಒಂದೂವರೆ ಲಕ್ಷ ರೂಪಾಯಿಯನ್ನು ಯುವತಿಗೆ ಮರಳಿಸಿದ್ದ. ಆದರೆ, ಸ್ವಲ್ಪ ದಿನಗಳ ನಂತರ ಯುವತಿಯನ್ನು ನಂಬಿಸಿ ಆ ಹಣವನ್ನೂ ಮರಳಿ ಪಡೆದಿದ್ದ.
ಹಣ ಪಡೆದು ಹೋದ ಜಗನ್ನಾಥ್ ನಾಪತ್ತೆಯಾಗಿದ್ದರಿಂದ ಮೋಸಗೊಂಡಿದ್ದನ್ನು ತಿಳಿದು, ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಯುವತಿ ನೇರವಾಗಿ ಹೆಣ್ಣೂರು ಠಾಣೆಗೆ ದೂರು ನೀಡಿದ್ದಳು. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆತ ಬಹಳಷ್ಟು ಯುವತಿಯರಿಗೆ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯ ಮಾಡಿಕೊಂಡು ಮೋಸ ಎಸಗಿದ್ದು ತಿಳಿದುಬಂದಿದೆ. ರಾಜ್ಯದ ವಿವಿಧ ಕಡೆ ಹತ್ತಕ್ಕೂ ಹೆಚ್ಚು ಠಾಣೆಗಳಲ್ಲಿ ಜಗನ್ನಾಥ್ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿವೆ.
Hennur Police on Wednesday arrested a 34-year-old man who allegedly cheated woman on a matrimonial site by pretending to be a civil engineer. The accused, identified as Jagannath S Sajjanar, had come out of prison on bail barely eight months ago and resumed his criminal activities since then, police said. Jagannath is a resident of Ullal, but originally hails from Vijayapura.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm