ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm