ಬ್ರೇಕಿಂಗ್ ನ್ಯೂಸ್
07-09-20 03:28 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೇಲೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಹೆಸರಲ್ಲಿ ಬೆದರಿಕೆ ಕರೆ ಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಿಎಂ ನಿವಾಸ 'ಮಾತೋಶ್ರೀ' ಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಕೆಲವೇ ದಿನಗಳಲ್ಲಿ ಮಾತೋಶ್ರೀಯನ್ನು ಬ್ಲಾಸ್ಟ್ ಮಾಡುವುದಾಗಿ ಹೇಳಿದ್ದಾನೆ.
ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದ. ಬೆದರಿಕೆ ಕರೆಯ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಹುಸಿ ಕರೆ ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.


ಆದರೂ ಕರೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಮಾತೋಶ್ರೀ ಆವರಣದಲ್ಲಿ ಭದ್ರತೆ ಹೆಚ್ಚಿಸಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿ 10.30ರ ಸುಮಾರಿಗೆ ಕರೆ ಮಾಡಿದ್ದ ವ್ಯಕ್ತಿ , ದಾವೂದ್ ಇಬ್ರಾಹಿಂ ಲೈನಲ್ಲಿದ್ದಾರೆ. ಸಿಎಂ ಉದ್ಧವ್ ಠಾಕ್ರೆಗೆ ಕರೆ ಹಸ್ತಾಂತರ ಮಾಡುವಂತೆ ಹೇಳಿದ್ದಾನೆ. ಆದರೆ ಕರೆ ಸ್ವೀಕರಿಸಿದ ವ್ಯಕ್ತಿ ಉದ್ಧವ್ ಠಾಕ್ರೆಗೆ ಕರೆಯನ್ನು ಹಸ್ತಾಂತರ ಮಾಡಲಿಲ್ಲ. ಅದೇ ವ್ಯಕ್ತಿ ಮತ್ತೊಮ್ಮೆ ಕರೆ ಮಾಡಿದ್ದು ತಾನು ದುಬೈನಿಂದ ಕರೆ ಮಾಡುತ್ತಿದ್ದು ದಾವೂದ್ ಸಹಚರ ಎಂದು ಹೇಳಿದ್ದ. ಹೆಸರು ಕೇಳಿದ್ದಕ್ಕೆ ಹೇಳಿರಲಿಲ್ಲ. ಈ ಬಗ್ಗೆ ಭದ್ರತಾ ಸಿಬಂದಿ ಆಬಳಿಕ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಮಹಾರಾಷ್ಟ್ರ ಸರಕಾರ ಘಟನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಿ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm