ಬ್ರೇಕಿಂಗ್ ನ್ಯೂಸ್
07-09-20 03:28 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೇಲೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಹೆಸರಲ್ಲಿ ಬೆದರಿಕೆ ಕರೆ ಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಿಎಂ ನಿವಾಸ 'ಮಾತೋಶ್ರೀ' ಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಕೆಲವೇ ದಿನಗಳಲ್ಲಿ ಮಾತೋಶ್ರೀಯನ್ನು ಬ್ಲಾಸ್ಟ್ ಮಾಡುವುದಾಗಿ ಹೇಳಿದ್ದಾನೆ.
ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದ. ಬೆದರಿಕೆ ಕರೆಯ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಹುಸಿ ಕರೆ ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.


ಆದರೂ ಕರೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಮಾತೋಶ್ರೀ ಆವರಣದಲ್ಲಿ ಭದ್ರತೆ ಹೆಚ್ಚಿಸಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿ 10.30ರ ಸುಮಾರಿಗೆ ಕರೆ ಮಾಡಿದ್ದ ವ್ಯಕ್ತಿ , ದಾವೂದ್ ಇಬ್ರಾಹಿಂ ಲೈನಲ್ಲಿದ್ದಾರೆ. ಸಿಎಂ ಉದ್ಧವ್ ಠಾಕ್ರೆಗೆ ಕರೆ ಹಸ್ತಾಂತರ ಮಾಡುವಂತೆ ಹೇಳಿದ್ದಾನೆ. ಆದರೆ ಕರೆ ಸ್ವೀಕರಿಸಿದ ವ್ಯಕ್ತಿ ಉದ್ಧವ್ ಠಾಕ್ರೆಗೆ ಕರೆಯನ್ನು ಹಸ್ತಾಂತರ ಮಾಡಲಿಲ್ಲ. ಅದೇ ವ್ಯಕ್ತಿ ಮತ್ತೊಮ್ಮೆ ಕರೆ ಮಾಡಿದ್ದು ತಾನು ದುಬೈನಿಂದ ಕರೆ ಮಾಡುತ್ತಿದ್ದು ದಾವೂದ್ ಸಹಚರ ಎಂದು ಹೇಳಿದ್ದ. ಹೆಸರು ಕೇಳಿದ್ದಕ್ಕೆ ಹೇಳಿರಲಿಲ್ಲ. ಈ ಬಗ್ಗೆ ಭದ್ರತಾ ಸಿಬಂದಿ ಆಬಳಿಕ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಮಹಾರಾಷ್ಟ್ರ ಸರಕಾರ ಘಟನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಿ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm