ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm