ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm