ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm