ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm