ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm