ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm