ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm