ಬ್ರೇಕಿಂಗ್ ನ್ಯೂಸ್
06-09-21 07:27 pm Headline Karnataka News Network ಕ್ರೈಂ
ನವದೆಹಲಿ, ಸೆ.6 : ಮಹಿಳೆಯ ಜೊತೆ ಅಫೇರ್ ಹೊಂದಿದ್ದ ಯುವಕನೊಬ್ಬ ಆಕೆಯನ್ನು ಮದುವೆಯಾಗದಿದ್ದರೆ, ತನ್ನ ಮೇಲೆ ರೇಪ್ ಕೇಸ್ ಕೊಡುತ್ತಾಳೆಂಬ ಭಯದಲ್ಲಿ ಮಹಿಳೆಯನ್ನೇ ಭೀಭತ್ಸವಾಗಿ ಕೊಲೆಗೈದು ಮುಖವನ್ನು ಗುರುತು ಸಿಗದಂತೆ ಜಜ್ಜಿಹಾಕಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧಿಸಿ ಸೂರತ್ ಪೊಲೀಸರು 38 ವರ್ಷದ ವಿನಯ್ ರಾಯ್ ಎಂಬ ಬಿಹಾರ ಮೂಲದ ಯುವಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್ ಬಾರ್ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ಸಂಶಯದ ಮೇಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ನಂದೂರ್ ಬಾರ್ ರೈಲು ಹಳಿಯ ಬಳಿ ಕುತ್ತಿಗೆ ಸೀಳಿ, ಮುಖದ ಚರ್ಮವನ್ನು ಸುಲಿದು ಗುರುತು ಸಿಗದಂತೆ ಮಾಡಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಮೂಲತಃ ಬಿಹಾರದವನಾಗಿರುವ ವಿನಯ್ ರಾಯ್, ಸೂರತ್ ನಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕಾರಜ್ ಎಂಬ ಗ್ರಾಮದಲ್ಲಿ ವಾಸವಿದ್ದ. ಆತನಿಗೆ ಮದುವೆಯಾಗಿದ್ದು ಎರಡು ಮಕ್ಕಳನ್ನು ಹೊಂದಿದ್ದ. ಈ ನಡುವೆ, ಬೇರೊಬ್ಬ ಮಹಿಳೆಯೊಂದಿಗೆ ಎರಡು ವರ್ಷಗಳಿಂದ ಸಂಬಂಧವನ್ನೂ ಇಟ್ಟುಕೊಂಡಿದ್ದ. ಇವರ ನಡುವೆ ಇತ್ತೀಚೆಗೆ ಜಟಾಪಟಿ ನಡೆದಿದ್ದು, ತನ್ನನ್ನು ಮದುವೆಯಾಗದಿದ್ದರೆ ಅತ್ಯಾಚಾರ ಕೇಸ್ ಹಾಕುವುದಾಗಿ ಬೆದರಿಸಿದ್ದಳು. ಆಕೆಗೆ ಈ ಹಿಂದೆಯೂ ಬೇರೊಬ್ಬನ ಜೊತೆ ಸಂಪರ್ಕ ಇದ್ದುದು ತಿಳಿದುಬಂದಿತ್ತು. ಅಲ್ಲದೆ, ಆ ಬಗ್ಗೆ ವ್ಯಕ್ತಿಯ ವಿರುದ್ಧ ಅತ್ಯಾಚಾರ ದೂರು ನೀಡಿ, ಜೈಲು ಪಾಲಾಗುವಂತೆ ಮಾಡಿದ್ದಳು. ಹಳೆ ವಿಚಾರವನ್ನು ಹೇಳುತ್ತಾ ತನ್ನನ್ನು ಮದುವೆಯಾಗದಿದ್ದರೆ, ನಿನ್ನ ವಿರುದ್ಧವೂ ಅತ್ಯಾಚಾರ ಕೇಸು ದಾಖಲಿಸುವುದಾಗಿ ಬೆದರಿಸಿದ್ದಳು. ಹಾಗಾಗಿ ಆಕೆಯನ್ನು ಮುಗಿಸಲು ಪ್ಲಾನ್ ಹಾಕಿ, ನಂದೂರ್ ಬಾರ್ ಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ನಂದೂರ್ ಬಾರ್ ರೈಲು ಹಳಿಯ ಬಳಿ ಮಹಿಳೆಯ ಶವ ಪತ್ತೆಯಾಗಿತ್ತು. ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ, ಮಹಿಳೆ ಮತ್ತು ಆಕೆಯನ್ನು ಕೊಲೆಗೈದ ಆರೋಪಿ ಇಬ್ಬರೂ ಸೂರತ್ ನವರು ಅನ್ನೋದು ಗೊತ್ತಾಗಿತ್ತು. ಸೂರತ್ ಪೊಲೀಸರು ಬೆನ್ನತ್ತಿದ್ದು, ಆರೋಪಿ ವಿನಯ್ ರಾಯ್ ಕೈವಾಡ ಕಂಡುಬಂದು ವಿಚಾರಣೆ ನಡೆಸಿದಾಗ ಮಹಿಳೆಯನ್ನು ವಿಕೃತವಾಗಿ ಕೊಂದು ಹಾಕಿರುವ ವಿಚಾರ ಬಯಲಾಗಿದೆ.
A 38-year-old man has allegedly murdered a woman with whom he was having an affair - afraid that she might lodge a complaint of rape against him if he did not marry her.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm