ಬ್ರೇಕಿಂಗ್ ನ್ಯೂಸ್
06-09-21 07:27 pm Headline Karnataka News Network ಕ್ರೈಂ
ನವದೆಹಲಿ, ಸೆ.6 : ಮಹಿಳೆಯ ಜೊತೆ ಅಫೇರ್ ಹೊಂದಿದ್ದ ಯುವಕನೊಬ್ಬ ಆಕೆಯನ್ನು ಮದುವೆಯಾಗದಿದ್ದರೆ, ತನ್ನ ಮೇಲೆ ರೇಪ್ ಕೇಸ್ ಕೊಡುತ್ತಾಳೆಂಬ ಭಯದಲ್ಲಿ ಮಹಿಳೆಯನ್ನೇ ಭೀಭತ್ಸವಾಗಿ ಕೊಲೆಗೈದು ಮುಖವನ್ನು ಗುರುತು ಸಿಗದಂತೆ ಜಜ್ಜಿಹಾಕಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧಿಸಿ ಸೂರತ್ ಪೊಲೀಸರು 38 ವರ್ಷದ ವಿನಯ್ ರಾಯ್ ಎಂಬ ಬಿಹಾರ ಮೂಲದ ಯುವಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್ ಬಾರ್ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ಸಂಶಯದ ಮೇಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ನಂದೂರ್ ಬಾರ್ ರೈಲು ಹಳಿಯ ಬಳಿ ಕುತ್ತಿಗೆ ಸೀಳಿ, ಮುಖದ ಚರ್ಮವನ್ನು ಸುಲಿದು ಗುರುತು ಸಿಗದಂತೆ ಮಾಡಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಮೂಲತಃ ಬಿಹಾರದವನಾಗಿರುವ ವಿನಯ್ ರಾಯ್, ಸೂರತ್ ನಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕಾರಜ್ ಎಂಬ ಗ್ರಾಮದಲ್ಲಿ ವಾಸವಿದ್ದ. ಆತನಿಗೆ ಮದುವೆಯಾಗಿದ್ದು ಎರಡು ಮಕ್ಕಳನ್ನು ಹೊಂದಿದ್ದ. ಈ ನಡುವೆ, ಬೇರೊಬ್ಬ ಮಹಿಳೆಯೊಂದಿಗೆ ಎರಡು ವರ್ಷಗಳಿಂದ ಸಂಬಂಧವನ್ನೂ ಇಟ್ಟುಕೊಂಡಿದ್ದ. ಇವರ ನಡುವೆ ಇತ್ತೀಚೆಗೆ ಜಟಾಪಟಿ ನಡೆದಿದ್ದು, ತನ್ನನ್ನು ಮದುವೆಯಾಗದಿದ್ದರೆ ಅತ್ಯಾಚಾರ ಕೇಸ್ ಹಾಕುವುದಾಗಿ ಬೆದರಿಸಿದ್ದಳು. ಆಕೆಗೆ ಈ ಹಿಂದೆಯೂ ಬೇರೊಬ್ಬನ ಜೊತೆ ಸಂಪರ್ಕ ಇದ್ದುದು ತಿಳಿದುಬಂದಿತ್ತು. ಅಲ್ಲದೆ, ಆ ಬಗ್ಗೆ ವ್ಯಕ್ತಿಯ ವಿರುದ್ಧ ಅತ್ಯಾಚಾರ ದೂರು ನೀಡಿ, ಜೈಲು ಪಾಲಾಗುವಂತೆ ಮಾಡಿದ್ದಳು. ಹಳೆ ವಿಚಾರವನ್ನು ಹೇಳುತ್ತಾ ತನ್ನನ್ನು ಮದುವೆಯಾಗದಿದ್ದರೆ, ನಿನ್ನ ವಿರುದ್ಧವೂ ಅತ್ಯಾಚಾರ ಕೇಸು ದಾಖಲಿಸುವುದಾಗಿ ಬೆದರಿಸಿದ್ದಳು. ಹಾಗಾಗಿ ಆಕೆಯನ್ನು ಮುಗಿಸಲು ಪ್ಲಾನ್ ಹಾಕಿ, ನಂದೂರ್ ಬಾರ್ ಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ನಂದೂರ್ ಬಾರ್ ರೈಲು ಹಳಿಯ ಬಳಿ ಮಹಿಳೆಯ ಶವ ಪತ್ತೆಯಾಗಿತ್ತು. ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ, ಮಹಿಳೆ ಮತ್ತು ಆಕೆಯನ್ನು ಕೊಲೆಗೈದ ಆರೋಪಿ ಇಬ್ಬರೂ ಸೂರತ್ ನವರು ಅನ್ನೋದು ಗೊತ್ತಾಗಿತ್ತು. ಸೂರತ್ ಪೊಲೀಸರು ಬೆನ್ನತ್ತಿದ್ದು, ಆರೋಪಿ ವಿನಯ್ ರಾಯ್ ಕೈವಾಡ ಕಂಡುಬಂದು ವಿಚಾರಣೆ ನಡೆಸಿದಾಗ ಮಹಿಳೆಯನ್ನು ವಿಕೃತವಾಗಿ ಕೊಂದು ಹಾಕಿರುವ ವಿಚಾರ ಬಯಲಾಗಿದೆ.
A 38-year-old man has allegedly murdered a woman with whom he was having an affair - afraid that she might lodge a complaint of rape against him if he did not marry her.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm