ಬ್ರೇಕಿಂಗ್ ನ್ಯೂಸ್
 
            
                        06-09-21 07:27 pm Headline Karnataka News Network ಕ್ರೈಂ
 
            ನವದೆಹಲಿ, ಸೆ.6 : ಮಹಿಳೆಯ ಜೊತೆ ಅಫೇರ್ ಹೊಂದಿದ್ದ ಯುವಕನೊಬ್ಬ ಆಕೆಯನ್ನು ಮದುವೆಯಾಗದಿದ್ದರೆ, ತನ್ನ ಮೇಲೆ ರೇಪ್ ಕೇಸ್ ಕೊಡುತ್ತಾಳೆಂಬ ಭಯದಲ್ಲಿ ಮಹಿಳೆಯನ್ನೇ ಭೀಭತ್ಸವಾಗಿ ಕೊಲೆಗೈದು ಮುಖವನ್ನು ಗುರುತು ಸಿಗದಂತೆ ಜಜ್ಜಿಹಾಕಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧಿಸಿ ಸೂರತ್ ಪೊಲೀಸರು 38 ವರ್ಷದ ವಿನಯ್ ರಾಯ್ ಎಂಬ ಬಿಹಾರ ಮೂಲದ ಯುವಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್ ಬಾರ್ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ಸಂಶಯದ ಮೇಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ನಂದೂರ್ ಬಾರ್ ರೈಲು ಹಳಿಯ ಬಳಿ ಕುತ್ತಿಗೆ ಸೀಳಿ, ಮುಖದ ಚರ್ಮವನ್ನು ಸುಲಿದು ಗುರುತು ಸಿಗದಂತೆ ಮಾಡಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಮೂಲತಃ ಬಿಹಾರದವನಾಗಿರುವ ವಿನಯ್ ರಾಯ್, ಸೂರತ್ ನಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕಾರಜ್ ಎಂಬ ಗ್ರಾಮದಲ್ಲಿ ವಾಸವಿದ್ದ. ಆತನಿಗೆ ಮದುವೆಯಾಗಿದ್ದು ಎರಡು ಮಕ್ಕಳನ್ನು ಹೊಂದಿದ್ದ. ಈ ನಡುವೆ, ಬೇರೊಬ್ಬ ಮಹಿಳೆಯೊಂದಿಗೆ ಎರಡು ವರ್ಷಗಳಿಂದ ಸಂಬಂಧವನ್ನೂ ಇಟ್ಟುಕೊಂಡಿದ್ದ. ಇವರ ನಡುವೆ ಇತ್ತೀಚೆಗೆ ಜಟಾಪಟಿ ನಡೆದಿದ್ದು, ತನ್ನನ್ನು ಮದುವೆಯಾಗದಿದ್ದರೆ ಅತ್ಯಾಚಾರ ಕೇಸ್ ಹಾಕುವುದಾಗಿ ಬೆದರಿಸಿದ್ದಳು. ಆಕೆಗೆ ಈ ಹಿಂದೆಯೂ ಬೇರೊಬ್ಬನ ಜೊತೆ ಸಂಪರ್ಕ ಇದ್ದುದು ತಿಳಿದುಬಂದಿತ್ತು. ಅಲ್ಲದೆ, ಆ ಬಗ್ಗೆ ವ್ಯಕ್ತಿಯ ವಿರುದ್ಧ ಅತ್ಯಾಚಾರ ದೂರು ನೀಡಿ, ಜೈಲು ಪಾಲಾಗುವಂತೆ ಮಾಡಿದ್ದಳು. ಹಳೆ ವಿಚಾರವನ್ನು ಹೇಳುತ್ತಾ ತನ್ನನ್ನು ಮದುವೆಯಾಗದಿದ್ದರೆ, ನಿನ್ನ ವಿರುದ್ಧವೂ ಅತ್ಯಾಚಾರ ಕೇಸು ದಾಖಲಿಸುವುದಾಗಿ ಬೆದರಿಸಿದ್ದಳು. ಹಾಗಾಗಿ ಆಕೆಯನ್ನು ಮುಗಿಸಲು ಪ್ಲಾನ್ ಹಾಕಿ, ನಂದೂರ್ ಬಾರ್ ಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ನಂದೂರ್ ಬಾರ್ ರೈಲು ಹಳಿಯ ಬಳಿ ಮಹಿಳೆಯ ಶವ ಪತ್ತೆಯಾಗಿತ್ತು. ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ, ಮಹಿಳೆ ಮತ್ತು ಆಕೆಯನ್ನು ಕೊಲೆಗೈದ ಆರೋಪಿ ಇಬ್ಬರೂ ಸೂರತ್ ನವರು ಅನ್ನೋದು ಗೊತ್ತಾಗಿತ್ತು. ಸೂರತ್ ಪೊಲೀಸರು ಬೆನ್ನತ್ತಿದ್ದು, ಆರೋಪಿ ವಿನಯ್ ರಾಯ್ ಕೈವಾಡ ಕಂಡುಬಂದು ವಿಚಾರಣೆ ನಡೆಸಿದಾಗ ಮಹಿಳೆಯನ್ನು ವಿಕೃತವಾಗಿ ಕೊಂದು ಹಾಕಿರುವ ವಿಚಾರ ಬಯಲಾಗಿದೆ.
 
            
            
            A 38-year-old man has allegedly murdered a woman with whom he was having an affair - afraid that she might lodge a complaint of rape against him if he did not marry her.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm