ಬ್ರೇಕಿಂಗ್ ನ್ಯೂಸ್
07-09-21 11:56 am Mangaluru Correspondent ಕ್ರೈಂ
ಸುಳ್ಯ, ಸೆ.7 : 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಎಂಬವರ ಮೇಲೆ ನಡೆದಿದ್ದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ಮಂಡಲ ಸಮಿತಿಯ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಸರಸ್ವತಿ ಕಾಮತ್ ಮೇಲಿನ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸೆ.6 ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿದೆ. 2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಮೇಲೆ ಹಲ್ಲೆ ಮತ್ತು ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಸೆಕ್ಷನ್ 149 ,147/149, 341, 506 , 504, 323, 354 ಸೆಕ್ಷನ್ ಅಡಿಯಲ್ಲಿ ಪ್ರಕರಣ ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಜೆ ಎಂ ಎಫ್ ಸಿ ಕೋರ್ಟ್ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಅವರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ, ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರತಿಕ್ರಿಯಿಸಿದ್ದು ಈ ಬಗ್ಗೆ ನಮಗೆ ಅಧಿಕೃತ ಆದೇಶ ಪ್ರತಿ ದೊರೆತ ಬಳಿಕ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.
Sullia Zilla panchayat member BJP leader Harish Kanjipili sentensed to jail for two years over assult on congress member Saraswathi Kamath in 2014.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm