ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಡ್ರಗ್ಸ್ ನಂಟು ; ನಟಿ ಸಂಜನಾ ಗಲ್ರಾನಿ ಬಂಧನ…!

08-09-20 11:50 am       Bangalore Correspondent   ಕ್ರೈಂ

ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್​ವುಡ್​ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.

ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್​ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಜನಾ ಪರ್ಸನಲ್ ಮೊಬೈಲ್​ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್​ಆ್ಯಪ್​ ಚಾಟ್ ಹಾಗೂ ಮೆಸೇಂಜರ್​ನಲ್ಲಿರುವ ಮೆಸೇಜಸ್​ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಾದ ಇನ್​ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್​ಆ್ಯಪ್​ನಲ್ಲಿ ಎಷ್ಟು ಅಕೌಂಟ್​ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್​ಡ್ರೈವ್, ಟ್ಯಾಬ್, ಲ್ಯಾಪ್​ಟಾಪ್ ಸೇರಿ ಕೆಲ ಫೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.