ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm