ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm