ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm