ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm