ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm