ಬ್ರೇಕಿಂಗ್ ನ್ಯೂಸ್
09-09-21 03:05 pm Headline Karnataka News Network ಕ್ರೈಂ
ಶಿವಮೊಗ್ಗ, ಸೆ.9 : ನಡುರಸ್ತೆಯಲ್ಲಿ ಮಾರಕಾಸ್ತ್ರ ತೋರಿಸಿ ಆತಂಕ ಮೂಡಿಸಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದ್ದು, ಓರ್ವ ಪರಾರಿಯಾಗಿದ್ದಾನೆ.
ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಬುಧವಾರ ಬೆಳಗ್ಗೆ ಕಾರಿನಲ್ಲಿ ಬಂದಿದ್ದ ಯುವಕರು ಕ್ಷುಲ್ಲಕ ವಿಚಾರಕ್ಕೆ ಸಾರ್ವಜನಿಕರಿಗೆ ಚಾಕು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಯುವಕರು ಒಬ್ಬ ವ್ಯಕ್ತಿ ಮತ್ತು ಪೊಲೀಸ್ ಬ್ಯಾರಿಕೇಡ್ಗೆ ಕಾರು ಡಿಕ್ಕಿ ಹೊಡೆಸಿದ್ದರು. ಈ ಬಗ್ಗೆ ಸ್ಥಳೀಯರು ಪ್ರಶ್ನಿಸುತ್ತಿದ್ದಂತೆ, ಕಾರಿನಲ್ಲಿದ್ದ ನಾಲ್ವರು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಕಾರನ್ನು ಹಿಂದಕ್ಕೆ ತಿರುಗಿಸಿ ಪರಾರಿಯಾಗಲು ಯತ್ನಿಸಿದ್ದರು. ಬಳಿಕ ಕಾರನ್ನು ಸ್ಳಳದಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿದ ಯುವಕರನ್ನು ಜನರು ಅಟ್ಟಾಡಿಸಿ ಹಿಡಿದು, ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ಗಾಂಜಾ ಸೇವಿಸಿದ್ದು, ಅದರ ಮತ್ತಿನಲ್ಲಿ ದುಷ್ಕೃತ್ಯ ಎಸಗಲು ಮುಂದಾಗಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಗಾಂಜಾ ಸೇವೆನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾರನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತದೆ. ಅಲ್ಲದೆ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬನಿಗೆ ಅಪರಾಧ ಹಿನ್ನೆಲೆಯಿದೆ. ಅಂಗಡಿಯೊಂದರಲ್ಲಿ 2.50 ಲಕ್ಷ ರೂ. ಹಣ ಕಳವು ಮಾಡಿ ಸಿಕ್ಕಿಬಿದ್ದಿದ್ದ. ಎರಡು ವಾರದ ಹಿಂದಷ್ಟೇ ಈತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿಸಿದ್ದಾರೆ.
ಯುವಕರು ಬಳಕೆ ಮಾಡಿದ್ದ ಕಾರು ಅವರದ್ದಲ್ಲ. ಕಳ್ಳತನ ಮಾಡಿದ್ದ ಕಾರನ್ನು ಬಳಸಿ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕಾರು ಕಳ್ಳತನ ಆಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Three arrested for showing weapons in the road to Public in Shivamogga. When arrested the police have got to know that the car they were using was a theft car.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm