ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm