ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm