ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm