ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm