ಬ್ರೇಕಿಂಗ್ ನ್ಯೂಸ್
15-09-21 05:33 pm Headline Karnataka News Network ಕ್ರೈಂ
ಕೋಲಾರ, ಸೆ.15 : ಆರು ಕೋಟಿ ಮೌಲ್ಯದ ಎಂಐ ಕಂಪನಿಯ ಮೊಬೈಲ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಓರ್ವ ಆರೋಪಿಯನ್ನ ಕೋಲಾರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯ ಸಮುದ್ರ ಬಳಿ ಆಗಸ್ಟ್ 6ರಂದು ಚೆನ್ನೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಮೊಬೈಲ್ ತುಂಬಿದ್ದ ಕಂಟೇನರ್ ದರೋಡೆ ಮಾಡಲಾಗಿತ್ತು.
ತಮಿಳುನಾಡಿನ ಕಾಂಚೀಪುರಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಯನ್ನ ರಾಷ್ಟ್ರೀಯ ಹೆದ್ದಾರಿ-75ರ ದೇವರಾಯ ಸಮುದ್ರದ ಬಳಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನನ್ನ ಕಟ್ಟಿಹಾಕಿ, ಥಳಿಸಿ ಬಾಯಿಗೆ ಬಟ್ಟೆ ಇಟ್ಟು, ಲಾರಿ ಸಮೇತ ಪರಾರಿಯಾಗಿದ್ದರು.
ನಂತರ ಅದೇ ಹೆದ್ದಾರಿಯ ನೆರ್ನಹಳ್ಳಿ ಗೇಟ್ ಬಳಿ ಕಂಟೇನರ್ ನಿಲ್ಲಿಸಿ, ಬೇರೊಂದು ಲಾರಿಯಲ್ಲಿ ಮೊಬೈಲ್ ತುಂಬಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಕುಮಾರ್ ನೇತೃತ್ವದಲ್ಲಿ ನಾಲ್ಕು ಪೊಲೀಸ್ ತಂಡಗಳನ್ನ ರಚನೆ ಮಾಡಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಓರ್ವ ಆರೋಪಿಯನ್ನ ಬಂಧಿಸಿದ್ದಾರೆ. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರೆ ಆರೋಪಿಗಳ ಪತ್ತೆಗೂ ಬಲೆ ಬೀಸಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm