ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am