ಬ್ರೇಕಿಂಗ್ ನ್ಯೂಸ್
18-09-21 01:33 pm Mangaluru Correspondent ಕ್ರೈಂ
ಕೊಣಾಜೆ, ಸೆ.18: ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿ ಕ್ರಾಸ್ ನಲ್ಲಿ ಮರಿಕ್ಕಳ ಕಸಾಯಿಖಾನೆಗೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದರೂ, ಓರ್ವನ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದ್ದು ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಕೊಣಾಜೆ ಪೊಲೀಸರು ಬಜರಂಗದಳ ನೀಡಿದ್ದ ಮಾಹಿತಿಯಂತೆ ಪೂಪಾಡಿ ಕ್ರಾಸ್ ನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಸಮೇತ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದರು. ಈ ಬಗ್ಗೆ ಠಾಣೆಗೆ ಫೋನ್ ಮಾಡಿ ವಿಚಾರಿಸಿದಾಗ, ಪ್ರತಿಕ್ರಿಯಿಸಿದ ಪೊಲೀಸ್ ಸಿಬ್ಬಂದಿ, ಪಿಕ್ ಅಪ್ ವಾಹನ, ಹಸುಗಳನ್ನ ವಶಕ್ಕೆ ಪಡೆದಿದ್ದೇವೆ FIR ಇನ್ನೂ ಆಗಿಲ್ಲ. ಪಿಕ್ ಅಪ್ ನಲ್ಲಿ ಸಾಗಿಸುತ್ತಿದ್ದ ಹಸುಗಳನ್ನ ಸ್ಥಳೀಯ ಕೃಷಿಕರೋರ್ವರು ಹಾಲು ಉತ್ಪಾದಕ ಸಂಘದಿಂದ ಖರೀದಿಸಿದ್ದೆಂದು ಹೇಳುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದಿದ್ದರು. ಆದರೆ ಸಂಜೆ ವೇಳೆ, ಕೊಣಾಜೆ ಠಾಣೆಯಲ್ಲಿ ಕೊಳ್ನಾಡು ನಿವಾಸಿ ಅಬ್ದುಲ್ ರಝಾಕ್ ಎಂಬಾತನ ವಿರುದ್ಧ ಮಾತ್ರ ಪ್ರಕರಣ ದಾಖಲಾಗಿತ್ತು.


ಪೊಲೀಸರು ಇಬ್ಬರನ್ನ ವಶಕ್ಕೆ ತೆಗೆದಿದ್ದು, ಮತ್ತೋರ್ವ ಆರೋಪಿಯನ್ನ ಪ್ರಕರಣದಿಂದ ಕೈ ಬಿಟ್ಟದ್ದೇಕೆಂದು ಬಜರಂಗದಳದ ಜಿಲ್ಲಾ ಗೋರಕ್ಷಾ ಪ್ರಮುಖರಾದ ಪವಿತ್ರ ಕೆರೆಬೈಲ್ ಪ್ರಶ್ನಿಸಿದ್ದಾರೆ. ಕಾಣದ ಕೈಗಳ ಪ್ರಭಾವದಿಂದ ಪೊಲೀಸರು ದನಕಳ್ಳತನದ ಆರೋಪಿಯನ್ನ ಕೇಸು ದಾಖಲಿಸದೆ ಬಿಟ್ಟದ್ದು ಅಕ್ಷಮ್ಯವಾಗಿದ್ದು ಇದನ್ನ ವಿಶ್ವಹಿಂದೂ ಪರಿಷತ್, ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲದೆ ಈ ವಿಚಾರವನ್ನ ನಗರ ಪೊಲೀಸ್ ಕಮಿಷನರ್ ಗಮನಕ್ಕೂ ತರುವುದಾಗಿ ಪವಿತ್ರ ಕೆರೆಬೈಲ್ ಹೇಳಿದ್ದಾರೆ.
ಕರ್ನಾಟಕ - ಕೇರಳದ ಗಡಿಭಾಗವಾಗಿರುವ ಮರಿಕ್ಕಳದಲ್ಲಿ ಅಕ್ರಮ ಕಸಾಯಿಖಾನೆಯಿದ್ದು ನಿರಂತರವಾಗಿ ಗೋವುಗಳನ್ನ ಸುಳ್ಳು ದಾಖಲೆ ಸೃಷ್ಟಿಸಿ ಸಾಗಿಸುತ್ತಿರುವುದು ತಿಳಿದು ಬಂದಿದೆ. ಅದರ ಮಾಹಿತಿಯನ್ನೇ ಕೊಣಾಜೆ ಪೊಲೀಸರಿಗೆ ಮೊನ್ನೆ ನಮ್ಮ ಕಾರ್ಯಕರ್ತರು ನೀಡಿದ್ದು , ಪೊಲೀಸರು ವಶಕ್ಕೆ ಪಡೆದ ಆರೋಪಿಯನ್ನ ಬಿಟ್ಟು ಕಳಿಸಿದ್ದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಪವಿತ್ರ ಕೆರೆಬೈಲ್ ಆರೋಪಿಸಿದ್ದಾರೆ.
Mangalore Pickup van held for cattle trafficking in Mudipu Case turns into controversy after Konaje Police have left the prime accused. The Bajrang dal members have alleged and condemned the act of Konaje Police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm