ಬ್ರೇಕಿಂಗ್ ನ್ಯೂಸ್
19-09-21 01:52 pm Mangaluru Correspondent ಕ್ರೈಂ
Photo credits : Representational
ಪಡುಬಿದ್ರಿ, ಸೆ.19 : ಮಂಗಳೂರು- ಮುಂಬಯಿ ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಮುಂದುವರಿದಿದ್ದು, ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿ ಸುಚಿತಾ ಕುಸುಮಾಕರ್ ಶೆಟ್ಟಿಯವರ ಬೆಲೆ ಬಾಳುವ ಮೊಬೈಲ್ ಸಹಿತ ನಗದು ಇದ್ದ ಪರ್ಸ್ ಅನ್ನು ಸೆ.16 ರ ರಾತ್ರಿ ಕಳವು ಮಾಡಿರುವ ಬಗ್ಗೆ ದೂರು ನೀಡಿದ್ದಾರೆ.
ಪರ್ಸ್ನಲ್ಲಿ 75 ಸಾವಿರ ರೂ. ಮೌಲ್ಯದ ಮೊಬೈಲ್, 12 ಸಾವಿರ ರೂ. ನಗದು ಇನ್ನಿತರ ವಸ್ತುಗಳಿದ್ದವು. ಸುಚಿತಾ ಅವರು ಬೆಲೆ ಬಾಳುವ ವಜ್ರ ಮತ್ತು ಚಿನ್ನಾಭರಣಗಳನ್ನು ಸೀಟ್ನಡಿ ಇರಿಸಿದ್ದ ಬ್ಯಾಗ್ನಲ್ಲಿಟ್ಟಿದ್ದರು. ಹಾಗಾಗಿ ಅವುಗಳು ಕಳವಾಗಿಲ್ಲ. ಮುಂಬೈ ಬಂಟರ ಸಂಘದ ನಗರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕುಸುಮಾಕರ್ ಶೆಟ್ಟಿ ಮುಂಬಯಿಗೆ ತೆರಳಲು ಉಡುಪಿಯಲ್ಲಿ ಮತ್ಸ್ಯ ಗಂಧ ರೈಲು ಹತ್ತಿದ್ದರು. ರೈಲಿನ ಎಸಿ ಕೋಚ್ನಲ್ಲಿ ಸಹೋದರಿಯೊಂದಿಗೆ ಪ್ರಯಾಣ ಬೆಳೆಸಿದ್ದರು.

ಉಡುಪಿಯಿಂದ ಹೊರಟ ರೈಲು ತಡರಾತ್ರಿ ಪನ್ವೇಲ್ ಸಮೀಪದ ರೋಹಾ - ನಾಗೋಥಾಣೆಗೆ ತಲುಪಿದ್ದಾಗ ಸುಚಿತಾರಿಗೆ ನಿದ್ದೆ ಆವರಿಸಿದ್ದು ಮುಂಜಾನೆ 3.40ರ ವೇಳೆ ತಲೆದಿಂಬಿನಡಿ ಇಟ್ಟಿದ್ದ ಪರ್ಸ್ನ್ನು ಕಳ್ಳರು ಎಳೆದುಕೊಂಡು ಹೋಗಿದ್ದಾರೆ. ಕಂಪಾರ್ಟ್ಮೆಂಟಿನ ಕೊನೆಯ ಸೀಟ್ ನಲ್ಲಿ ಮಲಗಿದ್ದ ಕಾರಣ ಪರ್ಸ್ ಎಳೆದು ಬಾಗಿಲಿನ ಮೂಲಕ ಓಡಿ ಹೋಗಿದ್ದಾನೆ. ಈ ಸಂದರ್ಭ ಅವರು ಬೊಬ್ಬಿಟ್ಟರೂ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ.
ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಪ್ರಕಾರ, ಮುಂಬೈಯಿಂದ ಮಂಗಳೂರಿಗೆ ಬರುವ ಮತ್ಸ್ಯ ಗಂಧ ರೈಲಿನಲ್ಲಿ ಎರಡು ಕುಖ್ಯಾತ ಕಳ್ಳರ ತಂಡಗಳು ನಿರಂತರ ಕಳವು ಕೃತ್ಯದಲ್ಲಿ ತೊಡಗಿವೆ. ಆದರೆ ರೈಲ್ವೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ.
Udupi Robbery in Matsyagandha train Man robbed of 75 Thousand. The railway police are showing negligence it is said in this case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm