ಬ್ರೇಕಿಂಗ್ ನ್ಯೂಸ್
20-09-21 10:38 am Mangaluru Correspondent ಕ್ರೈಂ
ಉಳ್ಳಾಲ, ಸೆ.20: ಉಳ್ಳಾಲ ಮಾಸ್ತಿಕಟ್ಟೆ ಕುಮೇರು ಪಾಡಾಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಪಂಚಲೋಹದ ಮೊಗವನ್ನ ಕಳ್ಳರು ಎಗರಿಸಿದ್ದಾರೆ.
ಮಾಸ್ತಿಕಟ್ಟೆಯ ತೀಯ ಸಮಾಜ ಕುಟುಂಬಸ್ಥರ ಆರಾಧ್ಯ ಕುಮೇರು ಪಾಡಾಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಗುಡಿಯ ಬಾಗಿಲ ಬೀಗ ಒಡೆದು ಪಂಚಲೋಹದ ಮೊಗವನ್ನ ಕಳವು ಮಾಡಲಾಗಿದೆ. ಮೊಗವನ್ನ ಕ್ಷೇತ್ರಕ್ಕೆ ದಾನ ಮಾಡಿದ್ದ ಹತ್ತಿರದ ಮನೆಯ ನಿವಾಸಿ ನವೀನ್ ಡಿ ಕುಟ್ಟಪ್ಪ ಅವರು ಬೆಳಗ್ಗೆ ವಾಕಿಂಗ್ ಮಾಡುವಾಗ ಅಣ್ಣಪ್ಪನ ಗುಡಿಯ ಬಾಗಿಲು ತೆರೆದಿರುವುದನ್ನ ಕಂಡಿದ್ದಾರೆ. ಕೂಡಲೇ ಅವರು ದೈವಸ್ಥಾನದ ಮುಖ್ಯ ಅರ್ಚಕರಾದ ಭುಜಂಗ ಅವರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರ್ಚಕರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ದೈವಸ್ಥಾನದ ಹತ್ತಿರದ ಜಾಗೃತ ವಿವಿಧೋದ್ದೇಶ ಸಂಘ ಇನ್ನಿತರ ಮಳಿಗೆಗಳ ಸಿಸಿ ಕ್ಯಾಮೆರಾ ಫೂಟೇಜನ್ನ ತಪಾಸಣೆ
ನಡೆಸುತ್ತಿದ್ದಾರೆ.



ಕೇವಲ ಮೊಗವನ್ನ ಮಾತ್ರ ಕದ್ದೊಯ್ದರು !
ಅಣ್ಣಪ್ಪ ದೈವದ ಗುಡಿಯ ಬೀಗ ಒಡೆದ ಕಳ್ಳರು ಒಳಗಿದ್ದ ಸುಮಾರು ಒಂದು ಲಕ್ಷ ಬೆಳೆ ಬಾಳುವ ಪಂಚ ಲೋಹದ ಮೊಗವನ್ನು ಮಾತ್ರ ಎಗರಿಸಿ ಅಲ್ಲಿದ್ದ ಪ್ರಭಾವಳಿ, ಬೆಳ್ಳಿ ಮತ್ತು ಲೋಹದ ಕಡ್ಸಲೆ ಇತರ ದೈವೀ ಪರಿಕರಗಳನ್ನು ಹಾಗೇ ಬಿಟ್ಟು ಹೋಗಿದ್ದಾರೆ. ಕಳ್ಳರು ದೈವಸ್ಥಾನದ ಪ್ರಾಂಗಣದಲ್ಲಿರುವ
ಪಾಡಂಗರ ಭಗವತಿ ಗುಡಿಯ ಬಾಗಿಲ ಬೀಗವನ್ನೂ ಮುರಿಯಲು ಪ್ರಯತ್ನಿಸಿ ವಿಫಲವಾಗಿದ್ದು ಕಂಡುಬಂದಿದೆ.
ಉಳ್ಳಾಲದಂತಹ ಸೂಕ್ಷ್ಮ ಪ್ರದೇಶದಲ್ಲಿ ಹಿಂದೂಗಳ ನಂಬಿಕೆಗೆ ಘಾಸಿ ಉಂಟಾಗುವ ಕುಕೃತ್ಯಗಳು ನಡೆಯುತ್ತಿದ್ದು ಪೊಲೀಸರು ಆದಷ್ಟು ಶೀಘ್ರನೆ ಕಳ್ಳತನ ನಡೆಸಿದ ಆರೋಪಿಗಳನ್ನ ಬಂಧಿಸಬೇಕೆಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಆಗ್ರಹಿಸಿದ್ದಾರೆ.




ಕಾರಣೀಕ ಕ್ಷೇತ್ರ ಪೂಮಾಲೆ ಭಗವತಿ
ಕ್ಷೇತ್ರದ ಪರಿವಾರ ದೈವ ನಾಗನ ಗುಡಿಯ ನಾಗನ ಕಲ್ಲನ್ನು ವರುಷಗಳ ಹಿಂದೆ ನಾಲ್ವರು ಅನ್ಯಮತೀಯರು ಸಮೀಪದ ಬಾವಿಗೆ ಎಸೆದಿದ್ದರಂತೆ. ಅದರ ಪ್ರತಿಫಲವಾಗಿ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನುಳಿದವರು ಕಷ್ಟಕ್ಕೆ ತುತ್ತಾಗಿ ಕ್ಷೇತ್ರಕ್ಕೆ ತಪ್ಪು ಕಾಣಿಕೆ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಅಣ್ಣಪ್ಪ ದೈವವೂ ಕಾರಣಿಕ ಶಕ್ತಿಯಾಗಿದ್ದು ಅದರಿಂದಲೇ ಅತೀ ಶೀಘ್ರದಲ್ಲಿ ಕಳ್ಳನ ಬಂಧನವಾಗುವುದೆಂದು ದೈವಸ್ಥಾನದ ಅರ್ಚಕರು ಹೇಳಿದ್ದಾರೆ.
Ullal Padangra Bhagavathi temple robbery lakhs worth idol stolen. When the priest opened the temple in the morning lakhs worth idol was missing. The ullal police are now investigating the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm