ಬ್ರೇಕಿಂಗ್ ನ್ಯೂಸ್
20-09-21 02:54 pm Mangaluru Correspondent ಕ್ರೈಂ
ಮಂಗಳೂರು, ಸೆ.20: ನಗರದ ಕೊಡಿಯಾಲ್ ಬೈಲಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಕಚೇರಿಗೆ ನುಗ್ಗಿದ ಆಗಂತುಕನೊಬ್ಬ ಅಲ್ಲಿದ್ದ ಮೂವರು ಸಿಬಂದಿಗೆ ಕತ್ತಿಯಿಂದ ಕಡಿದು ದಾಂಧಲೆ ನಡೆಸಿರುವ ಘಟನೆ ನಡೆದಿದೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ತಾನು ಇಲ್ಲಿನ ಹಳೆ ವಿದ್ಯಾರ್ಥಿ ಎಂದು ಹೇಳಿಕೊಂಡಿದ್ದಾನೆ. ಬಳಿಕ ಯಾರೋ ಸ್ಟಾಫ್ ಒಬ್ಬರನ್ನು ಕೇಳಿದ್ದು ಅವರು ಈಗ ಇಲ್ಲ ಎಂದು ಸಿಬಂದಿ ಪ್ರತಿಕ್ರಿಯಿಸಿದ್ದಾರೆ. ಅವರಿಗೊಂದು ಗಿಫ್ಟ್ ಕೊಡಲಿಕ್ಕಿದೆ ಎಂದು ಹೇಳುತ್ತಾ ಹರಿತ ಕತ್ತಿ ಹೊರ ತೆಗೆದಿದ್ದು ಅಲ್ಲಿದ್ದವರ ಮೇಲೆ ಬೀಸಿದ್ದಾನೆ. ಮೂವರು ಸಿಬಂದಿ ಕತ್ತಿಯೇಟಿನಿಂ ಗಾಯಗೊಂಡಿದ್ದಾರೆ.







ಸ್ಟೆನೋ ಗ್ರಾಫರ್ ಆಗಿರುವ ನಿರ್ಮಲಾ (43) ತಲೆ ಮತ್ತು ಕೈಗೆ ಗಂಭೀರ ಗಾಯಗೊಂಡಿದ್ದಾರೆ. ಪ್ರಥಮ ದರ್ಜೆ ಸಹಾಯಕಿ ಆಗಿರುವ ರೀನಾ ರಾಯ್(45) ಮತ್ತು ಅಟೆಂಡರ್ ಗುಣವತಿ (58) ಅವರಿಗೂ ಕತ್ತಿಯೇಟು ಬಿದ್ದಿದ್ದು ತಲೆ, ಕೈ, ಬೆನ್ನಿಗೆ ಕಡಿದ ಗಾಯಕ್ಕೀಡಾಗಿದ್ದಾರೆ. ಕತ್ತಿ ತೆಗೆದು ಬೀಸಿದ್ದನ್ನು ನೋಡಿದ ಮಹಿಳಾ ಸಿಬಂದಿಯೊಬ್ಬರು ಹೊರಗೆ ಬಂದಿದ್ದು ಕಟ್ಟಡದ ಹೊರಗೆ ಇದ್ದ ಜೈಲು ಸೆಕ್ಯುರಿಟಿಗೆ ತಿಳಿಸಿದ್ದಾರೆ. ಕೂಡಲೇ ಆ ಸಿಬಂದಿ ತಮ್ಮ ಜೈಲು ಸಿಬಂದಿ ಪೊಲೀಸರನ್ನು ಕರೆದಿದ್ದು ಅಲ್ಲಿಗೆ ತೆರಳುವಷ್ಟರಲ್ಲಿ ಮೂವರಿಗೆ ಹಲ್ಲೆ ಮಾಡಿ, ಚೇರ್ ಒಂದರಲ್ಲಿ ಕತ್ತಿ ಹಿಡಿದು ಕುಳಿತಿದ್ದ.
ಬಳಿಕ ಪೊಲೀಸರು ಆಗಂತುಕ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಕಮಿಷನರ್ ಶಶಿಕುಮಾರ್, ಜಿಪಂ ಸಿಇಓ ಕುಮಾರ್, ಡಿಡಿಪಿಐ ಸೇರಿದಂತೆ ಅಧಿಕಾರಿಗಳು ವಿಷಯ ತಿಳಿದು ದೌಡಾಯಿಸಿ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಆರೋಪಿ 35 ವರ್ಷದ ಯುವಕನಾಗಿದ್ದು ಯಾಕಾಗಿ ಈ ಕೃತ್ಯ ನಡೆಸಿದ್ದಾನೆ. ಆತನ ಉದ್ದೇಶ ಏನಿತ್ತು ಎಂಬುದನ್ನು ತನಿಖೆ ನಡೆಸಬೇಕಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಗಾಯಾಳು ಮೂವರು ಸಿಬಂದಿಯನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಅಗತ್ಯ ಚಿಕಿತ್ಸೆ ನೀಡಲಾಗುವುದು. ಸದ್ಯಕ್ಕೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಪಂ ಸಿಇಓ ಕುಮಾರ್ ತಿಳಿಸಿದ್ದಾರೆ. ಯುವಕನ ಕೃತ್ಯದಿಂದ ಅಲ್ಲಿನ ಇತರ ಸಿಬಂದಿ ಭಯಭೀತರಾಗಿದ್ದಾರೆ.
Video:
Miscrent attacks three woman staffs of DIET institute, District Institute of education and training brutally in Mangalore inside their office using knife. The The accused has been arrested by police and has been Interrogated by police. The incident took place in broad daylight inside their office.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm