ಬ್ರೇಕಿಂಗ್ ನ್ಯೂಸ್
21-09-21 05:43 pm Mangaluru Correspondent ಕ್ರೈಂ
ಪುತ್ತೂರು, ಸೆ.21: ಅನ್ಯಕೋಮಿನ ವ್ಯಕ್ತಿಗಳ ಜೊತೆ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಲಾಡ್ಜ್ ಮೇಲೆ ದಾಳಿ ನಡೆಸಿ, ಮಹಿಳೆ ಮತ್ತು ಆಕೆಯ ಜೊತೆಗಿದ್ದವರ ಮೇಲೆ ಹಲ್ಲೆ ಎಸಗಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳಿಂದ ಬೆಂಗಳೂರು ಮೂಲದ ಮಹಿಳೆ ರಾಜೇಶ್ವರಿ(36) ಎಂಬವರು ತಂಗಿದ್ದರು. ಇತ್ತೀಚೆಗೆ ಅಪಘಾತದಲ್ಲಿ ಪೊಲೀಸ್ ಕೇಸು ದಾಖಲಾಗಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಮಹಿಳೆ ಬಂದಿದ್ದರು. ಇದಕ್ಕಾಗಿ ಬೆಂಗಳೂರಿನಿಂದ ತನ್ನ ಸಹೋದ್ಯೋಗಿ ಆಗಿರುವ ಮಂಗಳೂರು ಉಳ್ಳಾಲ ನಿವಾಸಿ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಎಂಬವರನ್ನು ಜೊತೆಗೆ ಕರೆತಂದಿದ್ದರು.

ಸೆ.17 ರಂದು ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಪುತ್ತೂರಿಗೆ ಬಂದಿದ್ದು, ಲಾಡ್ಜ್ನಲ್ಲಿ ತಂಗಿದ್ದರು. ಕೋರ್ಟ್ ಕೇಸು ಇದ್ದುದರಿಂದ ಕಾರನ್ನು ಬಿಡಿಸಿಕೊಳ್ಳುವುದು ಸಾಧ್ಯವಾಗದೇ ಎರಡು ದಿನಗಳಿಂದ ಉಳಿದಿದ್ದರು. ಆದರೆ, ಹಿಂದು ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಪುತ್ತೂರಿನ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ತಡರಾತ್ರಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದು ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಬಳಿಕ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದಾಗ ಹಲ್ಲೆ ನಡೆಸಿದ್ದು ಅಶ್ಲೀಲವಾಗಿ ನಿಂದಿಸಿ ಫೋಟೊ ತೆಗೆದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅದರಂತೆ, ಘಟನೆ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Puttur HJV activists assault Woman who was with Muslim guy in lodge. In connection to this the Puttur police have arrested two members of Hindu Jagrana Vedike
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm