ಬ್ರೇಕಿಂಗ್ ನ್ಯೂಸ್
21-09-21 05:43 pm Mangaluru Correspondent ಕ್ರೈಂ
ಪುತ್ತೂರು, ಸೆ.21: ಅನ್ಯಕೋಮಿನ ವ್ಯಕ್ತಿಗಳ ಜೊತೆ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಲಾಡ್ಜ್ ಮೇಲೆ ದಾಳಿ ನಡೆಸಿ, ಮಹಿಳೆ ಮತ್ತು ಆಕೆಯ ಜೊತೆಗಿದ್ದವರ ಮೇಲೆ ಹಲ್ಲೆ ಎಸಗಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳಿಂದ ಬೆಂಗಳೂರು ಮೂಲದ ಮಹಿಳೆ ರಾಜೇಶ್ವರಿ(36) ಎಂಬವರು ತಂಗಿದ್ದರು. ಇತ್ತೀಚೆಗೆ ಅಪಘಾತದಲ್ಲಿ ಪೊಲೀಸ್ ಕೇಸು ದಾಖಲಾಗಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಮಹಿಳೆ ಬಂದಿದ್ದರು. ಇದಕ್ಕಾಗಿ ಬೆಂಗಳೂರಿನಿಂದ ತನ್ನ ಸಹೋದ್ಯೋಗಿ ಆಗಿರುವ ಮಂಗಳೂರು ಉಳ್ಳಾಲ ನಿವಾಸಿ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಎಂಬವರನ್ನು ಜೊತೆಗೆ ಕರೆತಂದಿದ್ದರು.

ಸೆ.17 ರಂದು ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಪುತ್ತೂರಿಗೆ ಬಂದಿದ್ದು, ಲಾಡ್ಜ್ನಲ್ಲಿ ತಂಗಿದ್ದರು. ಕೋರ್ಟ್ ಕೇಸು ಇದ್ದುದರಿಂದ ಕಾರನ್ನು ಬಿಡಿಸಿಕೊಳ್ಳುವುದು ಸಾಧ್ಯವಾಗದೇ ಎರಡು ದಿನಗಳಿಂದ ಉಳಿದಿದ್ದರು. ಆದರೆ, ಹಿಂದು ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಪುತ್ತೂರಿನ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ತಡರಾತ್ರಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದು ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಬಳಿಕ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದಾಗ ಹಲ್ಲೆ ನಡೆಸಿದ್ದು ಅಶ್ಲೀಲವಾಗಿ ನಿಂದಿಸಿ ಫೋಟೊ ತೆಗೆದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅದರಂತೆ, ಘಟನೆ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Puttur HJV activists assault Woman who was with Muslim guy in lodge. In connection to this the Puttur police have arrested two members of Hindu Jagrana Vedike
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm