ಬ್ರೇಕಿಂಗ್ ನ್ಯೂಸ್
23-09-21 12:10 pm Udupi Correspondent ಕ್ರೈಂ
ಕುಂದಾಪುರ, ಸೆ.23 : ಮೊಬೈಲ್ ಅಂಗಡಿ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್ನ ಮುಸ್ತಫ(34) ಎಂಬವರು ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ಕುಂದಾಪುರದಲ್ಲಿ ವಾಸವಾಗಿದ್ದರು. ಸೆ.17ರಂದು ರಾತ್ರಿ ಅಂಗಡಿ ಬಂದ್ ಮಾಡಿ ವ್ಯವಹಾರದ ಹಣ ಹಾಗೂ ಇತರ ದಾಖಲಾತಿಗಳ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನೇರಂಬಳ್ಳಿಯ ಮುಖ್ತಾರ್ ಸೇರಿದಂತೆ ಮೂವರು ಆರೋಪಿಗಳು, ಹಲ್ಲೆಗೈದು ರಿವಾಲ್ವರ್ ತೋರಿಸಿ ಬೆದರಿಸಿ, ಬೆಂಗಳೂರಿಗೆ ಅಪಹರಿಸಿಕೊಂಡು ಹೋಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಸೆ.18ರಂದು ನಸುಕಿನ ವೇಳೆ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದೊಯ್ದಿದ್ದು, 25 ವರ್ಷ ಪ್ರಾಯದ ಓರ್ವ ಮಹಿಳೆ ಮನೆಯವರಿಗೆ ಫೋನ್ ಮಾಡಿ 50,000 ರೂ. ಹಣವನ್ನು ಹಾಕಬೇಕೆಂದು ಬೆದರಿಕೆ ಹಾಕಿದ್ದಾರೆ. ಆನಂತರ ಮುಸ್ತಫ ಅವರ ಮೊಬೈಲಿನಿಂದಲೇ ಖಾತೆಯಿಂದ ತಮ್ಮ ಖಾತೆಗೆ 50000 ರೂ. ಹಣ ಜಮಾ ಮಾಡಿಕೊಂಡಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಎಟಿಎಂನಿಂದ 3,14,175 ರೂ.ವನ್ನು ಡ್ರಾ ಮಾಡಿದ್ದಾರೆ ಎಂದು ದೂರಲಾಗಿದೆ.
ಬಳಿಕ ಚೆಕ್ ಪುಸ್ತಕಕ್ಕೆ ಸಹಿ ಮಾಡಿಸಿ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದಾಗಿ ಹೇಳಿದ್ದಾರೆ. ಸೆ.18ರಂದು ರಾತ್ರಿ ಆರೋಪಿಗಳು ಮುಸ್ತಫ ಅವರನ್ನು ಬಿಟ್ಟಿದ್ದಾರೆ ಎನ್ನಲಾಗಿದೆ. ಸೆ.19ರಂದು ಮುಸ್ತಫಾ ಊರಿಗೆ ಬಂದಿದ್ದು ಆರೋಪಿಗಳ ವಿರುದ್ಧ ಒಟ್ಟು 4,64,175 ರೂ. ಹಣ ಹಾಗೂ 1,00,000 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
A youth running a mobile phone shop here has alleged that a six-member gang kidnapped him and robbed money and valuables from him. Musthafa (34), a native of Arehole in Byndoor taluk, and presently residing in a flat in Kundapur, was kidnapped by the gang.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm