ಬ್ರೇಕಿಂಗ್ ನ್ಯೂಸ್
23-09-21 12:10 pm Udupi Correspondent ಕ್ರೈಂ
ಕುಂದಾಪುರ, ಸೆ.23 : ಮೊಬೈಲ್ ಅಂಗಡಿ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್ನ ಮುಸ್ತಫ(34) ಎಂಬವರು ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ಕುಂದಾಪುರದಲ್ಲಿ ವಾಸವಾಗಿದ್ದರು. ಸೆ.17ರಂದು ರಾತ್ರಿ ಅಂಗಡಿ ಬಂದ್ ಮಾಡಿ ವ್ಯವಹಾರದ ಹಣ ಹಾಗೂ ಇತರ ದಾಖಲಾತಿಗಳ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನೇರಂಬಳ್ಳಿಯ ಮುಖ್ತಾರ್ ಸೇರಿದಂತೆ ಮೂವರು ಆರೋಪಿಗಳು, ಹಲ್ಲೆಗೈದು ರಿವಾಲ್ವರ್ ತೋರಿಸಿ ಬೆದರಿಸಿ, ಬೆಂಗಳೂರಿಗೆ ಅಪಹರಿಸಿಕೊಂಡು ಹೋಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ.18ರಂದು ನಸುಕಿನ ವೇಳೆ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದೊಯ್ದಿದ್ದು, 25 ವರ್ಷ ಪ್ರಾಯದ ಓರ್ವ ಮಹಿಳೆ ಮನೆಯವರಿಗೆ ಫೋನ್ ಮಾಡಿ 50,000 ರೂ. ಹಣವನ್ನು ಹಾಕಬೇಕೆಂದು ಬೆದರಿಕೆ ಹಾಕಿದ್ದಾರೆ. ಆನಂತರ ಮುಸ್ತಫ ಅವರ ಮೊಬೈಲಿನಿಂದಲೇ ಖಾತೆಯಿಂದ ತಮ್ಮ ಖಾತೆಗೆ 50000 ರೂ. ಹಣ ಜಮಾ ಮಾಡಿಕೊಂಡಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಎಟಿಎಂನಿಂದ 3,14,175 ರೂ.ವನ್ನು ಡ್ರಾ ಮಾಡಿದ್ದಾರೆ ಎಂದು ದೂರಲಾಗಿದೆ.
ಬಳಿಕ ಚೆಕ್ ಪುಸ್ತಕಕ್ಕೆ ಸಹಿ ಮಾಡಿಸಿ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದಾಗಿ ಹೇಳಿದ್ದಾರೆ. ಸೆ.18ರಂದು ರಾತ್ರಿ ಆರೋಪಿಗಳು ಮುಸ್ತಫ ಅವರನ್ನು ಬಿಟ್ಟಿದ್ದಾರೆ ಎನ್ನಲಾಗಿದೆ. ಸೆ.19ರಂದು ಮುಸ್ತಫಾ ಊರಿಗೆ ಬಂದಿದ್ದು ಆರೋಪಿಗಳ ವಿರುದ್ಧ ಒಟ್ಟು 4,64,175 ರೂ. ಹಣ ಹಾಗೂ 1,00,000 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
A youth running a mobile phone shop here has alleged that a six-member gang kidnapped him and robbed money and valuables from him. Musthafa (34), a native of Arehole in Byndoor taluk, and presently residing in a flat in Kundapur, was kidnapped by the gang.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm