ಬ್ರೇಕಿಂಗ್ ನ್ಯೂಸ್
23-09-21 12:10 pm Udupi Correspondent ಕ್ರೈಂ
ಕುಂದಾಪುರ, ಸೆ.23 : ಮೊಬೈಲ್ ಅಂಗಡಿ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್ನ ಮುಸ್ತಫ(34) ಎಂಬವರು ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ಕುಂದಾಪುರದಲ್ಲಿ ವಾಸವಾಗಿದ್ದರು. ಸೆ.17ರಂದು ರಾತ್ರಿ ಅಂಗಡಿ ಬಂದ್ ಮಾಡಿ ವ್ಯವಹಾರದ ಹಣ ಹಾಗೂ ಇತರ ದಾಖಲಾತಿಗಳ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನೇರಂಬಳ್ಳಿಯ ಮುಖ್ತಾರ್ ಸೇರಿದಂತೆ ಮೂವರು ಆರೋಪಿಗಳು, ಹಲ್ಲೆಗೈದು ರಿವಾಲ್ವರ್ ತೋರಿಸಿ ಬೆದರಿಸಿ, ಬೆಂಗಳೂರಿಗೆ ಅಪಹರಿಸಿಕೊಂಡು ಹೋಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ.18ರಂದು ನಸುಕಿನ ವೇಳೆ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದೊಯ್ದಿದ್ದು, 25 ವರ್ಷ ಪ್ರಾಯದ ಓರ್ವ ಮಹಿಳೆ ಮನೆಯವರಿಗೆ ಫೋನ್ ಮಾಡಿ 50,000 ರೂ. ಹಣವನ್ನು ಹಾಕಬೇಕೆಂದು ಬೆದರಿಕೆ ಹಾಕಿದ್ದಾರೆ. ಆನಂತರ ಮುಸ್ತಫ ಅವರ ಮೊಬೈಲಿನಿಂದಲೇ ಖಾತೆಯಿಂದ ತಮ್ಮ ಖಾತೆಗೆ 50000 ರೂ. ಹಣ ಜಮಾ ಮಾಡಿಕೊಂಡಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಎಟಿಎಂನಿಂದ 3,14,175 ರೂ.ವನ್ನು ಡ್ರಾ ಮಾಡಿದ್ದಾರೆ ಎಂದು ದೂರಲಾಗಿದೆ.
ಬಳಿಕ ಚೆಕ್ ಪುಸ್ತಕಕ್ಕೆ ಸಹಿ ಮಾಡಿಸಿ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದಾಗಿ ಹೇಳಿದ್ದಾರೆ. ಸೆ.18ರಂದು ರಾತ್ರಿ ಆರೋಪಿಗಳು ಮುಸ್ತಫ ಅವರನ್ನು ಬಿಟ್ಟಿದ್ದಾರೆ ಎನ್ನಲಾಗಿದೆ. ಸೆ.19ರಂದು ಮುಸ್ತಫಾ ಊರಿಗೆ ಬಂದಿದ್ದು ಆರೋಪಿಗಳ ವಿರುದ್ಧ ಒಟ್ಟು 4,64,175 ರೂ. ಹಣ ಹಾಗೂ 1,00,000 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
A youth running a mobile phone shop here has alleged that a six-member gang kidnapped him and robbed money and valuables from him. Musthafa (34), a native of Arehole in Byndoor taluk, and presently residing in a flat in Kundapur, was kidnapped by the gang.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm