ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm