ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm